Belagavi News In Kannada | News Belgaum

ಕನ್ನಡೇತರರ ಮನವೊಲಿಸಿ: ಬಿ.ಎಲ್.ಸಂತೋಷ್

 

ಬೆಂಗಳೂರು: ಈ ಬಾರಿ ಮತದಾನದ ವೇಳೆ ಪ್ರತಿಯೊಂದು ಮತಗಟ್ಟೆಯಲ್ಲೂ ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಕನ್ನಡಿಗರಲ್ಲದವರು ಮತದಾನಕ್ಕೆ ಬರುವಂತೆ ಮನವೊಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಪಕ್ಷದ ವಿಸ್ತಾರಕರ ಸಭೆಯಲ್ಲಿ ಸೂಚಿಸಿದ್ದಾರೆ.

ಅಲ್ಲದೇ, ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಕಡೆಗಳಲ್ಲಿ ಶೇ 10ರಷ್ಟು ಹೆಚ್ಚುವರಿ ಮತಗಳು ಪಕ್ಷದ ಅಭ್ಯರ್ಥಿಗಳಿಗೆ ಬರುವಂತೆ ಶ್ರಮ ಹಾಕಬೇಕು. ಇನ್ನು ಕೇವಲ ಮೂರು ವಾರಗಳು ಉಳಿದಿವೆ. ಕಾಲ ಮೀರುವ ಮುನ್ನ ಈ ಎಲ್ಲ ಅಂಶಗಳ ಬಗ್ಗೆಯೂ ಗಮನಹರಿಸಬೇಕು ಎಂದು ನಾಯಕರು, ವಿಸ್ತಾರಕರು ಮತ್ತು ಸ್ಥಳೀಯ ನಾಯಕರಿಗೆ ಅವರು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಮತದಾನದ ಪ್ರಮಾಣ ಶೇ 10 ರಷ್ಟು ಹೆಚ್ಚಿಸಲು ಕಠಿಣ ಪರಿಶ್ರಮ ಹಾಕಲೇಬೇಕು. ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿರುವ ಕನ್ನಡೇತರರನ್ನು ತಲುಪಲು ಅವರ ಮನೆಗಳಿಗೆ ಹೋಗಬೇಕು. ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ಬರುವ ಅವರು ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕಲು ಆಸಕ್ತಿ ತೋರಿಸುವುದಿಲ್ಲ. ಆದ್ದರಿಂದ ಅವರನ್ನು ಸಂಪರ್ಕಿಸುವ ಕೆಲಸವನ್ನೂ ಮಾಡುವಂತೆ ಸೂಚಿಸಿದ್ದಾರೆ.

ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಲಿಂಗಾಯತ ಸಮುದಾಯ ಗಣನೀಯ ಪ್ರಮಾಣದಲ್ಲಿದ್ದು ಈ ಮತಗಳನ್ನು ಹೆಚ್ಚು ಪಡೆಯುವ ಬಗ್ಗೆ ಗಮನಹರಿಸಬೇಕು. 2018 ರ ಚುನಾವಣೆಯಲ್ಲಿ ಸೋತ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಶೇ 20 ರಿಂದಶೇ 25 ರಷ್ಟು ಹೆಚ್ಚು ಮತದಾನ ಆಗುವಂತೆ ನೋಡಿಕೊಳ್ಳಬೇಕು. ಇದರಿಂದ ಪಕ್ಷದ ಅಭ್ಯರ್ಥಿ ಗೆಲ್ಲಲು ಸಾಧ್ಯ ಎಂದು ಅವರು ಸಲಹೆ ನೀಡಿದ್ದಾರೆ.

ಯಾವ ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕಣಕ್ಕಿಳಿಸಲಾಗಿದೆಯೋ ಅಲ್ಲಿ ಹೆಚ್ಚು ಗಮನ ಕೇಂದ್ರೀಕರಿಸ
ಲಾಗಿದೆ. ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ, ಮಹದೇವಪುರದಲ್ಲಿ ಅರವಿಂದ ಲಿಂಬಾವಳಿ ಅವರ ಪತ್ನಿ ಸ್ಪರ್ಧಿಸಿದ್ದು, ಇವೆರಡೂ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಈ ಕ್ಷೇತ್ರದಲ್ಲಿ ಹೆಚ್ಚಿನ ಗಮನ ಹರಿಸುವ ಅಗತ್ಯವಿಲ್ಲ. ಆದರೆ, ಬಿಜೆಪಿ ಭದ್ರಕೋಟೆ ಅಲ್ಲದ ಕಡೆಗಳಲ್ಲಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಇಂತಹ ಕಡೆಗಳಲ್ಲಿ ಗೆಲ್ಲಲೇಬೇಕಾಗಿದೆ. ಹೀಗಾಗಿ ಪ್ರತಿಯೊಂದು ಮತಗಟ