Belagavi News In Kannada | News Belgaum

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು: ವಿಂಡೋ ಗ್ಲಾಸ್​ ಪುಡಿಪುಡಿ

ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ರಾಜ್ಯಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಜೊತೆಗೆ ಇಂದು ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿ.ಕೆ. ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್​ಎಎಲ್​ ಏರ್​ಪೋರ್ಟ್​​ಗೆ ಬಂದಿದ್ದರು. ಇಲ್ಲಿಂದ ಮುಳುಬಾಗಿಲಿಗೆ ಡಿ.ಕೆ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶವಾಗಿದೆ. ಹಾರಾಟ ವೇಳೆ ಹೆಲಿಕಾಪ್ಟರ್​ ಮುಂಭಾಗದ ವಿಂಡೋ​ ಗಾಜು ಪುಡಿಪುಡಿಯಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ಪುಡಿಪುಡಿಯಾಗಿದ್ದು ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶವಾಗಿದೆ. ಇದರಿಂದ ಡಿಕೆ ಶಿವಕುಮಾರ್ ಗಾಭರಿಯಾಗಿದ್ದಾರೆ. ಸದ್ಯ ಯಾವುದೇ ಹಾನಿಯಾಗಿಲ್ಲ. ಡಿ.ಕೆ.ಶಿವಕುಮಾರ್​  ಹೆಚ್​ಎಎಲ್​ ಏರ್​ಪೋರ್ಟ್​​ಗೆ ಹಿಂದಿರುಗಿದ್ದಾರೆ.//////