Belagavi News In Kannada | News Belgaum

ಪಿಯು ವಿದ್ಯಾರ್ಥಿನಿ ದುರಂತ ಸಾವು: ತನಿಖೆ ಚುರುಕು

ದಾವಣಗೆರೆ: ಕಾಲೇಜಿನ ಕಾಂಪೌಂಡ್​ನಿಂದ ಜಾರಿ ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಹರಿಹರದ ಕುರುಬರಹಳ್ಳಿಯ ಸಮೀಪದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜಿನಲ್ಲಿ ನಡೆದಿದೆ..

ಸಿನಿಕ್ಷಾ (16) ಮೃತಪಟ್ಟ ವಿದ್ಯಾರ್ಥಿನಿ. ಕಾಂಪೌಂಡ್​ನಿಂದ ಬಿದ್ದು ಸಿನಿಕ್ಷಾ ತೀವ್ರ ಗಾಯಗೊಂಡಿದ್ದಳು. ತಕ್ಷಣ ಆಕೆಯನ್ನು ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ..

 

ಮೃತ ಸಿನಿಕ್ಷಾ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಶಶಿಕಾಂತ್​ ಎಂಬುವರ ಪುತ್ರಿ. ಮಾನ್ಯತಾ ವಸತಿ ಕಾಲೇಜಿನಲ್ಲಿ ಸೈನ್ಸ್ ವಿಭಾಗದ ಪ್ರಥಮ ಪಿಯುಸಿಗೆ ಪ್ರವೇಶ ಪಡೆದಿದ್ದಳು. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಾಲೇಜಿಗೆ ಹಾಜರಾಗಿದ್ದಳು..

ಇದೀಗ ಅಕಾಲಿಕವಾಗಿ ಮೃತಪಟ್ಟಿದ್ದು, ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.