Belagavi News In Kannada | News Belgaum

ಅಕ್ಕಿ ಸಿಗದೇ ಇದ್ದರೂ ಪರ್ಯಾಯ ಮಾರ್ಗಗಳಿವೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಮೈಸೂರು: ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ ನಡೆದಿದೆ. ಒಂದು- ಎರಡು ತಿಂಗಳು ಯೋಜನೆ ತಡವಾದರೂ ಏನೂ ಸಮಸ್ಯೆಯಾಗದು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು..

 

ಕೇಂದ್ರ ಸರ್ಕಾರ ಅಕ್ಕಿ ನೀಡದ ಕಾರಣ ಅನ್ನಭಾಗ್ಯ ಯೋಜನೆ ಜಾರಿಗೆ ತೊಡಕಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೇಂದ್ರದಿಂದ ಅಕ್ಕಿ ಸಿಗದೇ ಇದ್ದರೂ ಪರ್ಯಾಯ ಮಾರ್ಗಗಳಿವೆ. ಈಗಾಗಲೇ ಐದು ಕೆ.ಜಿ. ಅಕ್ಕಿ ನೀಡಲಾಗುತ್ತಿದೆ. ಅಕ್ಕಿ ಬದಲಾಗಿ ಬೇರೆ ಧಾನ್ಯಗಳನ್ನು ಸಹ ನೀಡಬಹುದು, ಆತಂಕಪಡುವಂತಹ ಅಗತ್ಯವಿಲ್ಲ ಎಂದರು..

 

‘ಬೆಂಗಳೂರು– ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕೆಲವು ತಾಂತ್ರಿಕ ಸಮಸ್ಯೆಯೂ ಕಾರಣ ಇರಬಹುದು. ಇದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ನಾವು ಸಹ ಅವರ ಜೊತೆಗೂಡಿ ಸರಿಪಡಿಸಲು ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದರು..

 

‘ಕಾಂಗ್ರೆಸ್ ಸರ್ಕಾರ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಪ್ರಯತ್ನ ಆರಂಭವಾಗಿದೆ. ಮಹಿಳೆಯರ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ಈಗಾಗಲೇ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಆಗಸ್ಟ್‌ 15ರಿಂದ ಜಾರಿಯಾಗಲಿದೆ. ಹದಗೆಟ್ಟಿರುವ ರಸ್ತೆಗಳನ್ನು ಮೂರು ಹಂತಗಳಲ್ಲಿ ಸರಿಪಡಿಸಲಾಗುವುದು’ ಎಂದು ತಿಳಿಸಿದರು..