20 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ಅಧಿಕಾರಿ

ಚಾಮರಾಜನಗರ: ನಗರಸಭೆಯಲ್ಲಿ ಇ-ಸ್ವತ್ತು ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.
ಕಂದಾಯ ಅಧಿಕಾರಿ ನಾರಾಯಣ್ 20 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದಿದ್ದಾರೆ. ಎರಡು ಸೈಟ್ಗಳನ್ನು ಏಕ ನಿವೇಶನ ಮಾಡಿಕೊಡಲು ನಾರಾಯಣ್ ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಲೋಕಾಯುಕ್ತ ಕಚೇರಿಗೆ ದೂರು ಬಂದಿತ್ತು. ಈ ಹಿನ್ನೆಲೆ ನಗರಸಭೆ ಕಚೇರಿಗೆ ಮಂಗಳವಾರ ಮಧ್ಯಾಹ್ನ ಆಗಮಿಸಿ ಕಾರ್ಯಾಚರಣೆಗಿಳಿದ ಲೋಕಾಯುಕ್ತ ಪೊಲೀಸರು ದೂರುದಾರರಿಂದ ನಾರಾಯಣ್ ಲಂಚ ಸ್ವೀಕಾರ ಮಾಡುವಾಗ ಸೆರೆ ಹಿಡಿದಿದ್ದಾರೆ. ನಗರಸಭೆ ಕಚೇರಿಯಲ್ಲಿ ಇನ್ನೂ ಪರಿಶೀಲನೆ ನಡೆಯುತ್ತಿದೆ.//////