Belagavi News In Kannada | News Belgaum

ಮುಗಿದು ಹೋಗದ ಸಂಪತ್ತು ಎಂದರೆ ಅದು ಜ್ಞಾನ ಸಂಪತ್ತು.: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಬೈಲಹೊಂಗಲ- ಮುಗಿದು ಹೋಗದ ಸಂಪತ್ತು ಎಂದರೆ ಅದು ಜ್ಞಾನ ಸಂಪತ್ತು. ಆ ಸಂಪತ್ತಿನ ಬೆಳವಣಿಗೆಗೆ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು, ನೂತನ ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಂಡು ಜ್ಞಾನ ಸಂಪಾದನೆಯನ್ನು ಮಾಡಿ ಅರ್ಥಪೂರ್ಣ ಬದುಕನ್ನು ನಿರ್ಮಿಸಿಕೊಳ್ಳಬೇಕೆಂದು   ಹೇಳಿದರು.

ಅವರು ಶನಿವಾರ ತಾಲೂಕಿನ ಸಂಸದರ ಆದರ್ಶ ಗ್ರಾಮವಾಗಿ ಆಯ್ಕೆಯಾಗಿರುವ ತುರಕರಶೀಗಿಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಂಥಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಜ್ಞಾನದಮಟ್ಟವನ್ನು ಹೆಚ್ಚಿಸಿಕೊಳ್ಳಲಿಕ್ಕೆ ಗ್ರಂಥಾಲಯಗಳು ಇಂದಿನ ಅಗತ್ಯವಾಗಿದೆ. ಹೀಗಾಗಿ ಇವತ್ತಿನ ದಿನ ನಾವೆಲ್ಲ ಗ್ರಂಥಾಲಯವನ್ನು ಹೆಚ್ಚು ಉಪಯೋಗ ಮಾಡಿಕೊಂಡು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕೆಂದರು.

ಗ್ರಂಥಾಲಯಗಳಿಲ್ಲದÀ ಊರುಗಳು ದೇವರಿಲ್ಲದ ಗುಡಿ ಇದ್ದಂತೆ ಪ್ರತಿಯೊಂದು ಊರಿನಲ್ಲಿ ಪ್ರತಿಯೊಬ್ಬರ ಮನೆಯಲ್ಲಿ ಗ್ರಂಥಾಲಯ ಇರಬೇಕಾದ್ದದು ಬಹಳ ಅಗತ್ಯವಿದೆ. ಸ್ಮರ್ಧಾತ್ಮಕ ಜಗತ್ತಿಗೆ ಮಕ್ಕಳು ತಾವು ತಮ್ಮನ್ನು ತೋಡಗಿಸಿಕೊಳ್ಳುವುದು ಇಂದಿನ ಅವಶ್ಯಕತೆಯಾಗಿದೆ. ತುರಕರಶೀಗಿಹಳ್ಳಿ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡುವ ದಿಶೆಯಲ್ಲಿ ಕಾಮಗಾರಿಗಳು ಪ್ರಾರಂಭವಾಗಿವೆ ಇವುಗಳನ್ನು ಹೆಚ್ಚು ತೀವ್ರಗತಿಯಲ್ಲಿ ಮಾಡಿ ಇಂದೊಂದು ಆದರ್ಶ ಗ್ರಾಮ ಮಾಡಲಿಕ್ಕೆ ಶಾಸಕ ಮಹಾಂತೇಶ ಕೌಜಲಗಿ ಅವರ ಸಹಕಾರ, ಮಾರ್ಗದರ್ಶನದೊಂದಿಗೆ ಮುಂದುವರೆಯುತ್ತೇವೆ ಎಂದರು.

ಕಿತ್ತೂರು ಕಲ್ಮಠ ಮಡಿವಾಳ ರಾಜಯೋಗೇಂದ್ರ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಶಾಸಕ ಮಹಾಂತೇಶ ಕೌಜಲಗಿ, ಗ್ರಾಪಂ. ಅಧ್ಯಕ್ಷ ಚಂದ್ರಶೇಖರ ಕಡೇಮನಿ, ತಾಪಂ.ಇಒ ಸುಭಾಸ ಸಂಪಗಾಂವಿ, ಪಿಡಿಓ ಮಡಿವಾಳಪ್ಪ ಅವ್ವಕ್ಕನವರ ಹಾಗೂ ಗ್ರಾಮಸ್ಥರು ಇದ್ದರು.