Belagavi News In Kannada | News Belgaum

ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ಬೆಳಗಾವಿ ಪ್ರವಾಸಿಮಂದಿರದಲ್ಲಿ ಮಂಗಳವಾರ (ಜು.11) ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು

ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ಬೆಳಗಾವಿ ಪ್ರವಾಸಿಮಂದಿರದಲ್ಲಿ ಮಂಗಳವಾರ (ಜು.11) ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು.
———————————————————

* ಜೈನ ಸಮಯದಾಯದ ಕಾಮಕುಮಾರ ನಂದಿ ಮಹಾರಾಜ್ ಅವರ ಬರ್ಬರ ಹತ್ಯೆ ಪ್ರಕರಣವು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದೆ.

* ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮಕ್ಕೆ ಭೇಟಿ ನೀಡಿ, ಪ್ರಕರಣ ಕುರಿತು ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿರುತ್ತೇನೆ.

* ಅಲ್ಪಸಂಖ್ಯಾತರ ಹಕ್ಕುಗಳು, ಶಾಸನಬದ್ಧ ಹಕ್ಕುಗಳ ರಕ್ಷಣೆ ಹಾಗೂ ಹಿತರಕ್ಷಣೆಯು ಆಯೋಗದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಶ್ರಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ.

* ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ. ಪ್ರಕರಣ ತನಿಖೆ ಹಂತದಲ್ಲಿದ್ದು, ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

* ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಮಾಹಿತಿಗಳು ತನಿಖೆಯಲ್ಲಿ ತಿಳಿದುಬರಲಿವೆ.

* ಪ್ರಕರಣದ ಪ್ರಮುಖ ಅಂಶಗಳ ಕುರಿತು ತನಿಖಾ ತಂಡದ ಜತೆಯೂ ಚರ್ಚೆ ನಡೆಸಲಾಗಿದೆ. ಕೊಲೆಯ ಉದ್ಧೇಶ, ಸಾಕ್ಷಿ ನಾಶ ಪ್ರಯತ್ನ, ಕೊಲೆಗೆ ಸಹಕರಿಸಿದರು ಸೇರಿದಂತೆ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ತಿಳಿಸಲಾಗಿದೆ.

* ವಿಶೇಷ ಪ್ರಕರಣ ಎಂದು ಪರಿಗಣಿಸಬೇಕು ಎಂದು ತಿಳಿಸಲಾಗಿದೆ. ಮೇಲ್ವಿಚಾರಣೆಯನ್ನು ಉತ್ತರ ವಲಯ ಐಜಿಪಿ ಅವರಿಗೆ ವಹಿಸಿಕೊಡುವಂತೆ ಸರಕಾರಕ್ಕೆ ಒಂದು ವಾರದೊಳಗೆ ವರದಿ ಸಲ್ಲಿಸಲಾಗುವುದು.

* ಐಜಿಪಿ ಮೇಲ್ವಿಚಾರಣೆಯಲ್ಲಿ ಆರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು. ಮುಂದಿನ ಆರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಬೇಕು.

* ಕೃತ್ಯಕ್ಕೆ ಸಹಕರಿಸಿದವರು ಸೇರಿದಂತೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನೆರವು ನೀಡಿದವರ ಬಂಧನ ಆಗಬೇಕು.

* ಅಪರಾಧಿಗಳಿಗೆ ಅತ್ಯಂತ ಕಠಿಣವಾದ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು.

* ಯಾವುದೇ ಸಂಸ್ಥೆ ತನಿಖೆ ಮಾಡಿದರೂ ಸರಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುಖ್ತಾರ್ ಹುಸೇನ್‌ ಪಠಾಣ, ಅಲ್ಪಸಂಖ್ಯಾತರ ಆಗೋಗದ ಮಾಜಿ ನಿರ್ದೇಶಕ ಸುರೇಶ್ ತಂಗಾ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಿರ್ಜಾನವರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.