ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ವಿಚಾರಣೆ ಆ.4ಕ್ಕೆ ಮುಂದೂ

ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗಾಗಿ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ..
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಪಿ.ಕೆ.ಮಿಶ್ರಾ ಅವರ ಪೀಠವು ಶುಕ್ರವಾರ ಈ ವಿಷಯವನ್ನು ಆಲಿಸಿತು. ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಈ ವಿಷಯವನ್ನು ಉಲ್ಲೇಖಿಸಿ ತುರ್ತು ವಿಚಾರಣೆಯನ್ನು ಕೋರಿದ ನಂತರ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಜುಲೈ 18 ರಂದು ರಾಹುಲ್ ಗಾಂಧಿ ಅವರ ಮನವಿಯನ್ನು ಆಲಿಸಲು
ಒಪ್ಪಿಕೊಂಡಿತ್ತು. ಜುಲೈ 7 ರ ಹೈಕೋರ್ಟ್ ತೀರ್ಪನ್ನು ತಡೆಹಿಡಿಯದಿದ್ದರೆ, ಅದು “ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ, ಚಿಂತನೆ ಮತ್ತು ಹೇಳಿಕೆಗೆ ಧಕ್ಕೆ ತರುತ್ತದೆ” ಎಂದು ರಾಹುಲ್ ಗಾಂಧಿ ತಮ್ಮ ಮೇಲ್ಮನವಿಯಲ್ಲಿ ಹೇಳಿದ್ದಾರೆ..