ಕೈದಿಗಳ ಮಾರಾಮಾರಿ ಕೊಲೆಗೆ ಯತ್ನ

ಬೆಳಗಾವಿ : ಹಿಂಡಲಗಾ ಜೈಲಿನಲ್ಲಿ ಕೈದಿಯಿಂದ ಮತ್ತೊಬ್ಬ ಕೈದಿಯ ಕೊಲೆಗೆ ಯತ್ನ,ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಕ್ರೂಡ್ರೈವರ್ನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ..
ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಓರ್ವ ಕೈದಿ ಸ್ಕ್ರೂಡ್ರೈವರ್ನಿಂದ ಮತ್ತೊಬ್ಬ ಕೈದಿಗೆ ಐದು ಬಾರಿ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ..
ಶಂಕರ ಭಜಂತ್ರಿ ಕೊಲೆ ಮಾಡಲು ಯತ್ನಿಸಿದ ಕೈದಿ. ಮಂಡ್ಯ ಮೂಲದ ಸಾಯಿಕುಮಾರ್ ಗಾಯಗೊಂಡ ವಿಚಾರಣಾಧೀನ ಕೈದಿ. ಸಾಯಿಕುಮಾರ್ ಅವರಿಗೆ ಎದೆ, ಹೊಟ್ಟೆ, ಕಿವಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯ ಐ.ಸಿ.ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಜೈಲಿನಲ್ಲಿ ನಡೆದ ಈ ಘರ್ಷಣೆಯನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲಾಸ್ಪತ್ರೆ ಎದರು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ..