ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ: ಸಾರ್ವಜನಿಕರ ಗಮನಕ್ಕೆ

ಬೆಳಗಾವಿ, ಆ.04 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಾಲಿ ಚಾಲ್ತಿಯಲ್ಲಿರುವ 110 ಕೆವಿ ಮುಗಳಖೋಡ (ಕಬ್ಬರ) ಸೈದಾಪೂರ ವಿದ್ಯುತ್ ಮಾರ್ಗದಿಂದ ಹಳ್ಳೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ 1ಟ0/11ಕೆವಿ ವಿದ್ಯುತ್ ಕೇಂದ್ರಕ್ಕೆ ಲೀಲೋ 2.649 ಕಿಮಿ ಲೈನ್ ಮಾರ್ಗವನ್ನು ನಿರ್ಮಿಸಲಾಗಿದೆ.
ಸದರಿ 110 ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಹಾಗೂ ಅಕ್ಕಪಕ್ಕದ ಹದ್ದಿನಲ್ಲಿ ಬರುವ ಹಳ್ಳಿಗಳು ಮತ್ತು ಸರಹದ್ದಿನ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ.
ವಿದ್ಯುತ್ ಪ್ರಸರಣ ಮಾರ್ಗವನ್ನು ಆ.7 2023 ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ತನ್ನು ಹರಿಬಿಡಲಾಗುವುದರಿಂದ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ, ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆಗಳನ್ನು ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಮಾಡಿದರೆ ಪ್ರಾಣಾಪಾಯಕವಾಗುವುದು. ಆದಕಾರಣ ಸಾರ್ವಜನಿಕರು ಯಾವುದೇ ಕೃತ್ಯಗಳನ್ನು ಮಾಡಬಾರದೆಂದು ತಿಳಿಸಲಾಗಿದೆ.
ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು ಬೆಳಗಾವಿಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.