Belagavi News In Kannada | News Belgaum

ವಿಧಾನ ಪರಿಷತ್ ಸ್ಥಾನಕ್ಕೆ ಮೂವರ ಹೆಸರಿಗೆ ರಾಜ್ಯಪಾಲರು ಅನುಮೋದನೆ

ಬೆಂಗಳೂರು: ವಿಧಾನ ಪರಿಷತ್ ನಾಮ ನಿರ್ದೇಶಿತ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಮೂವರ ಹೆಸರನ್ನು ಫೈನಲ್ ಮಾಡಲಾಗಿತ್ತು. ಅಲ್ಲದೇ ರಾಜ್ಯಪಾಲರ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಅನುಮೋದನೆಗಾಗಿ ಸರ್ಕಾರ ಕಳುಹಿಸಿಕೊಟ್ಟಿತ್ತು. ನಟಿ ಉಮಾಶ್ರೀ, ಎಂ.ಆರ್. ಸೀತಾರಾಮ್ ಹಾಗೂ ಸುಧಾಮ್ ದಾಸ್ ಅವರ ಹೆಸರನ್ನು ವಿಧಾನ ಪರಿಷತ್ ನಾಮನಿರ್ದೇಶಿತರನ್ನಾಗಿ ಮಾಡುವುದಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.

ಈ ಮೂಲಕ ಪರಿಷತ್ ಸ್ಥಾನಕ್ಕೆ ಮೂವರ ಹೆಸರಿಗೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯರ ಖಾಲಿ ಸ್ಥಾನಗಳ ಭರ್ತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿತ್ತು. ವಿಧಾನ ಪರಿಷತ್ ನ ನಾಮ ನಿರ್ದೇಶಿತ ಸದಸ್ಯರಾಗಿ ಮೂವರ ಹೆಸರು ಅಂತಿಮಗೊಳಿಸಿ, ರಾಜ್ಯಪಾಲರಿಗೆ ಈ ಪಟ್ಟಿಯನ್ನು ರವಾನಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ವಿಧಾನ ಪರಿಷತ್ ನಾಮ ನಿರ್ದೇಶಿತ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಿ, ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದ್ದರು. ಮಾಜಿ ಸಚಿವೆ ಉಮಾಶ್ರೀ, ಮಾಜಿ ಸಚಿವ ಎಂ.ಆರ್ ಸೀತಾರಾಂ ಹಾಗೂ ಮಾಜಿ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿತ್ತು.

 

ವಿಧಾನ ಪರಿಷತ್ತಿಗೆ ಮೂವರು ನಾಮನಿರ್ದೇಶಿತರ ಹೆಸರನ್ನು ಪಟ್ಟಿ ಮಾಡಿಕೊಂಡು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಿದ್ದರು. ಈ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿರೋದಾಗಿ ತಿಳಿದು ಬಂದಿದೆ. ಹೀಗಾಗಿ ವಿಧಾನ ಪರಿಷತ್ ನ ನಾಮ ನಿರ್ದೇಶಿಸಿತ ಸದಸ್ಯರಾಗಿ ಮಾಜಿ ಸಚಿವೆ ಉಮಾಶ್ರೀ, ಎಂ ಆರ್ ಸೀತಾರಾಮ್ ಹಾಗೂ ಸುಧಾಮ್ ದಾಸ್ ಆಯ್ಕೆಯಾಗಿದ್ದಾರೆ./////