Belagavi News In Kannada | News Belgaum

ಹೆಚ್‌ಡಿಕೆ ಆರೋಗ್ಯ ಸುಧಾರಣೆ; ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನು ಐಸಿಯುನಿಂದ ಶಿಫ್ಟ್ ಮಾಡಲಾಗಿದೆ.

ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಿ ನಿಗಾವಹಿಸಿದ್ದಾರೆ.

ವಾರ್ಡ್‌ಗೆ ಶಿಫ್ಟ್ ಮಾಡುವ ಮೊದಲು ಹೆಚ್‌ಡಿಕೆ ಆರೋಗ್ಯ ಪರಿಸ್ಥಿತಿ ತಿಳಿಯುವ ಸಲುವಾಗಿ ಸಿಟಿ ಸ್ಕ್ಯಾನ್ ಮಾಡಿದ್ದು, ರಿಪೋರ್ಟ್‌ನಲ್ಲಿ ಆರೋಗ್ಯ ಸುಧಾರಿಸಿರುವುದು ಕಂಡುಬಂದಿದೆ. ಬಳಿಕ ಅವರನ್ನು ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ./////