Belagavi News In Kannada | News Belgaum

ಬಿಜೆಪಿ– ಜೆಡಿಎಸ್‌ ಮೇಲೆ ಜನರಿಗೆ ನಂಬಿಕೆ ಇಲ್ಲ: ಜಗದೀಶ ಶೆಟ್ಟರ್‌

ಹುಬ್ಬಳ್ಳಿ: ‘ಅಸಹಾಯಕರು ಒಂದಾಗುವುದು ಸಾಮಾನ್ಯ. ಅದೇ ರೀತಿ, ಬಿಜೆಪಿ– ಜೆಡಿಎಸ್‌ ಎರಡೂ ಪಕ್ಷಗಳು ದುರ್ಬಲವಾಗಿದ್ದು, ಮೈತ್ರಿ ಅನಿವಾರ್ಯವಾಗಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಜಗದೀಶ ಶೆಟ್ಟರ್‌ ತಿಳಿಸಿದರು..

 

‘ಮೈತ್ರಿ  ವಿಚಾರ ಅವರಿಗೆ ಬಿಟ್ಟದ್ದು. ಎರಡೂ ಪಕ್ಷಗಳ ನಡುವೆ ಪೈಪೋಟಿ ಇತ್ತು. ಈಗ ಸ್ವಯಂ ಅನುಕೂಲಕ್ಕೆ ಮೈತ್ರಿ ಮಾಡಿಕೊಳ್ಳುತ್ತಿವೆ. ಆ ಪಕ್ಷಗಳ ಮೇಲೆ ಜನರಿಗೆ ವಿಶ್ವಾಸ ಮತ್ತು ನಂಬಿಕೆ ಹೋಗಿದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

.

‘ರಾಜ್ಯದಲ್ಲಿ ಕಾಂಗ್ರೆಸ್‌ ಬಲಗೊಂಡಿದೆ. ಅದಕ್ಕಾಗಿ ಹಲವು ನಾಯಕರು ಬರಲು ಸಿದ್ಧರಾಗಿದ್ದಾರೆ. ಯಾರೆಲ್ಲ ಸೇರ್ಪಡೆ ಆಗುವರು ಎಂಬುದನ್ನು ಈಗಲೇ ಹೇಳಲು ಆಗುವುದಿಲ್ಲ. ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇತರ ರಾಜ್ಯಗಳಲ್ಲೂ ಕಾಂಗ್ರೆಸ್‌ ಬಲಗೊಳ್ಳುತ್ತಿದೆ’ ಎಂದರು..