ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಅಳಿಯನ ಕೊರಳಲ್ಲಿ ಹುಲಿ ಉಗುರು : ಪೋಟೊ ವೈರಲ್

ಬೆಂಗಳೂರು: ವರ್ತೂರು ಸಂತೋಷ್ ಬಂಧನ ಬಳಿಕ ‘ಹುಲಿ ಉಗುರು’ ಪ್ರಕರಣ ರಾಜ್ಯದಲ್ಲಿ ಸುದ್ದಿ ಮಾಡುತ್ತಿದೆ. ಇದೀಗ ಈ ಪ್ರಕರಣದಲ್ಲಿ ಹಲವರಿಗೆ ಸಂಕಷ್ಟ ಎದುರಾಗಿದೆ. ಇದೀಗ ಹುಲಿ ಉಗುರು ಪ್ರಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ , ಅಳಿಯನ ಕೊರಳಿಗೆ ಸುತ್ತಿಕೊಳ್ಳುವ ಸಾಧ್ಯತೆ ಇದೆ.
ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಫೋಟೋಗಳು ವೈರಲ್ ಆಗುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಎಚ್ಚರಿತುಕೊಂಡು ಪ್ರಕರಣದಲ್ಲಿರುವವರ ಮನೆಗ ಭೇಟಿ ಕೊಟ್ಟು ಶೋಧ ಕಾರ್ಯ ನಡೆಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ ಹೆಬ್ಬಾಳಕರ್ , ಹುಬ್ಬಳ್ಳಿ ಲ್ಲಿರುವ ಅಳಿಯ ರಜತ್ ಉಳ್ಳಾಗಡ್ಡಿ ಕೊರಳಲ್ಲೂ ಹುಲಿ ಉಗುರು ಪೆಂಡೆಂಟ್ ಇರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂತೋಷ್ ಬಂಧನವಾಯ್ತು, ಇವರ ಬಂಧನ ಯಾವಾಗ? ಕಾನೂನು ಎಲ್ಲರಿಗೂ ಒಂದೇ. ಸೆಲೆಬ್ರೆಟಿಗಳು ಮಾತ್ರ ಯಾಕೆ ನೋಟಿಸ್ ಕೋಡುತ್ತೀರಾ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ಪ್ರಕರಣದಿಂದ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ.
ಮದುವೆ ಸಮಯದಲ್ಲಿ ಪೋಟೋ ಶೂಟ್ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸಹೋದರಿ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿ ಮಠ. ಹುಲಿ ಉಗುರು ಪೆಂಡೆಂಟ್ ಧರಿಸಿರುವ ವಿಚಾರಕ್ಕೆ ಪೇಚಿಗೆ ಸಿಲುಕಿಕೊಂಡಂತಾಗಿದೆ./////