Belagavi News In Kannada | News Belgaum

ಕಾಂಗ್ರೆಸ್​ ವಿರುದ್ಧ ಪೋಸ್ಟರ್ ಅಂಟಿಸಿದ್ದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲು

ಚಿಕ್ಕಮಗಳೂರು: ಕಾಂಗ್ರೆಸ್ ವಿರುದ್ಧ ಪೋಸ್ಟರ್  ಅಂಟಿಸಿದ್ದ 5 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಕಾಂಗ್ರೆಸ್ ಗ್ಯಾರಂಟಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, ಯತೀಂದ್ರ ಮತ್ತು ಕೆ‌ಜೆ ಜಾರ್ಜ್ ವಿರುದ್ಧ ವ್ಯಂಗ್ಯ ಪೋಸ್ಟರ್​​ ಅಂಟಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ, ಶಶಿ ಅಲ್ದೂರು, ಸೇರಿದಂತೆ ಐವರ ವಿರುದ್ಧ ಎಫ್​ಐಆರ್​ ಹಾಕಲಾಗಿದೆ. ತಾಲೂಕು ಕಚೇರಿ, KEB ಕಚೇರಿ ಸೇರಿದಂತೆ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಪೋಸ್ಟರ್ ಅಂಟಿಸಿದ್ದರು.//////